ಸುಳ್ಯ : ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಗಾಯಾಳು ಆಸ್ಪತ್ರೆಗೆ ದಾಖಲು

0


ಕರೆಂಟ್ ಬಿಲ್ ಕಟ್ಟದಿರುವುದಕ್ಕಾಗಿ ವಿದ್ಯುತ್ ಸಂಪರ್ಕ ತೆಗೆಯಲು ಹೋದ ಮೆಸ್ಕಾಂ ಸಿಬ್ಬಂದಿಯೊಬ್ಬರ ಮೇಲೆ ಸುಳ್ಯ ಓಡಬಾಯಿಯ ಹೋಟೆಲೊಂದರ ಮಾಲಕರು ಹಲ್ಲೆ ನಡೆಸಿದ್ದಾರೆಂಬ ಘಟನೆ ವರದಿಯಾಗಿದೆ. ಮೆಸ್ಕಾಂ ಸಿಬ್ಬಂದಿ ರಾಮಪ್ಪ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾರೆ.
ಹೋಟೆಲಿನ ವಿದ್ಯುತ್ ಬಿಲ್ಲಿನ ಬಗ್ಗೆ ಕೇಳಲು ಹೋದಾಗ ಹೋಟೆಲ್ ಮಾಲಕರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪೈಚಾರು ಭಾಗದ ಲೈನ್ ಮ್ಯಾನ್ ರಾಮಪ್ಪ ಎಂಬುವವರು ಹಲ್ಲೆಗೊಳಗಾಗಿದ್ದು ಅವರು ಸುಳ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.