ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ

0

ಸುಳ್ಯ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ತಾಲೂಕು ಪಂಚಾಯತ್ ನ ಸಾಮರ್ಥ್ಯ ಸೌಧದಲ್ಲಿ ಅ.28 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ವಹಿಸಿದ್ದರು. ತಹಶೀಲ್ದಾರ್ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ನ.ಪಂ.ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಹಾಗೂ ಸಮಾಜ ಕಲ್ಯಾಣಾಧಿಕಾರಿ ಧನಂಜಯ್ ಮುಖ್ಯ ಅತಿಥಿಗಳಾಗಿದ್ದರು.


ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ನಾಡಗೀತೆ ಗಾಯನದ ಬಳಿಕ ಪರಿಶಿಷ್ಟವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ಮೇಲ್ವಿಚಾರಕರಾದ ಶ್ರೀಮತಿ ಕಾವ್ಯ ಸ್ವಾಗತಿಸಿದರು.


ಬಿ.ಇ.ಒ. ರಮೇಶ್ ವಾಲ್ಮೀಕಿ ಮಹರ್ಷಿ ಕುರಿತು ಉಪನ್ಯಾಸಗೈದರು.
2023 ನೇ ಸಾಲಿನಲ್ಲಿ ಅತ್ಯುತ್ತಮ ಅಂಕ ಪಡೆದು ತೇರ್ಗಡೆಯಾದ ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.


ತಾಲೂಕು ಮಟ್ಟದ ಕ್ರೀಡಾ ವಿಕ್ರಮ ಕಾರ್ಯಕ್ರಮದ ಕುರಿತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸೂಫಿ ಪೆರಾಜೆ ಯವರು ವಿವರಿಸಿದರು.