ಶಿಕ್ಷಣ ಸಂಪನ್ಮೂಲ ಕೇಂದ್ರ ಸುಳ್ಯ ಘಟಕದ ವಾರ್ಷಿಕ ಮಹಾಸಭೆ

0

ಶಿಕ್ಷಣ ಸಂಪನ್ಮೂಲ ಕೇಂದ್ರ ಸುಳ್ಯ ಘಟಕ ಇದರ 2022- 23ನೇ ಸಾಲಿನ ವಾರ್ಷಿಕ ಮಹಾಸಭೆಯು ಅಕ್ಟೋಬರ್ 28ರಂದು ಸುಳ್ಯ ಶಿವ ಕೃಪಾ ಕಲಾಮಂದಿರದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಶಂಕರ್ ಪೆರಾಜೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನ ರೈ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಮಲಾ ಗೌಡ, ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ಎಂ ಉಪಸ್ಥಿತರಿದ್ದು ಮಾತನಾಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ಮತ್ತು ಮುಂದಿನ ಸಾಲಿನಲ್ಲಿ ನಿರ್ವಹಿಸಬೇಕಾದ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸುಳ್ಯ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮೋನಪ್ಪ ಕೊಳಗೆ ಕಳೆದ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿದರು. ಕೇಂದ್ರದ ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ಕಾಡುತೋಟ ಉಪಸ್ಥಿತರಿದ್ದರು.


ಜಿಲ್ಲಾ ಸಮಿತಿಯ ಸದಸ್ಯ ಹಾಗೂ ತರಬೇತುದಾರ ನಾರಾಯಣ ಕಿಲಂಗೋಡಿ ಕಾರ್ಯಕ್ರಮ ನಿರೂಪಿಸಿ ವಾಸ್ತವಿಕ ಮಾತನಾಡಿದರು.

ಸಭೆಯಲ್ಲಿ ತಾಲೂಕು ಸಮಿತಿಯ ಸಂಘಟನಾ ಕಾರ್ಯದರ್ಶಿ ಹಸೈನಾರ್ ಜಯನಗರ, ನಿರ್ದೇಶಕರುಗಳಾದ ವೆಂಕಟೇಶ್ ಭಟ್,ಅಬ್ದುಲ್ಲಾ ಎ ಅಜ್ಜಾವರ,ಶಾಂತಿನಗರ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಜೀರ್ ಶಾಂತಿನಗರ, ಗಾಂಧಿನಗರ ಕೆಪಿಎಸ್ ಕಾರ್ಯಾಧ್ಯಕ್ಷ ಚಿದಾನಂದ ಕುತ್ಪಾಜೆ,ಸುಜಾತ ಕದಿಕಡ್ಕ, ಚಂದ್ರಕಲಾ ಕೊಡಿಯಾಲ ಬೈಲು, ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಒಮ್ಮತದ ನಿರ್ಣಯಗಳನ್ನು ಮಂಡಿಸಿ ಮುಂದಿನ ದಿನಗಳಲ್ಲಿ ನಡೆಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆಗಳು ನಡೆಯಿತು.
ಪ್ರಧಾನ ಕಾರ್ಯದರ್ಶಿ ಮೋನಪ್ಪ ಕೊಳಗೆ ವಂದಿಸಿದರು.