ಬಾಳಿಲ: ಡಾ. ಪಿ.ಜಿ.ಎಸ್. ಪ್ರಕಾಶ್ ಸಂಸ್ಮರಣೆ – ರಕ್ತದಾನ ಶಿಬಿರ

0

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ – ಮುಪ್ಪೇರ್ಯ ಇದರ ಇದರ ಆಶ್ರಯದಲ್ಲಿ ದಿ. ಡಾ. ಪಿ.ಜಿ.ಎಸ್. ಎನ್. ಪ್ರಕಾಶ್ ರ ಸ್ಮರಣಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅ. 29ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ದೇವತಾರಾಧನಾ ಸಮಿತಿಯ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಡಾ. ಪಿ.ಜಿ.ಎಸ್. ಪ್ರಕಾಶ್ ರ ಪತ್ನಿ ಶ್ರೀಮತಿ ಲತಾ ಶಂಕರಿ, ಯುವ ವೈದ್ಯ ಡಾ. ಕಿಶನ್ ರಾವ್ ಬಾಳಿಲ, ದೇವತಾರಾಧನಾ ಸಮಿತಿಯ ಅಧ್ಯಕ್ಷ ಶೇಷಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ, ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸೆಲ್ವಿ ಮತ್ತು ಬ್ಲಡ್ ಬ್ಯಾಂಕ್ ಸಿಬ್ಬಂದಿ ಅ್ಯಂಟನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಕಮಲ ಪ್ರಾರ್ಥಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಅಯ್ಯನಕಟ್ಟೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಡಾ. ಕಿಶನ್ ರಾವ್ ಮತ್ತು ಅ್ಯಂಟನಿ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು. ಡಾ. ಕಿಶನ್ ರಾವ್ ಬಾಳಿಲರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಹಿಳಾ ಸಮಿತಿಯ ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು ಮತ್ತು ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಸದಸ್ಯೆ ಪುಷ್ಪಾವತಿ ಬಾಳಿಲ ವಂದಿಸಿದರು.