ಸಂಪಾಜೆ: ನಿಯಂತ್ರಣ ತಪ್ಪಿ ಕಬ್ಬಿನ ಗದ್ದೆಗೆ ನುಗ್ಗಿದ ಕಾರು, ಅಪಾಯದಿಂದ ಪಾರು

0

ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ತೋಟಕ್ಕೆ ನುಗ್ಗಿದ ಘಟನೆ ಸಂಪಾಜೆಯ ಚೌಕಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಸಂಪಾಜೆಯ ಶಂಕರ್ ಪ್ರಸಾದ್ ರೈ ಅವರ ಕಬ್ಬಿನ ತೋಟಕ್ಕೆ ನುಗ್ಗಿತ್ತು. ಕಾರಿನಲ್ಲಿ ದಂಪತಿ ಸಹಿತ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು ಎಂದು ತಿಳಿದುಬಂದಿದೆ.