ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

0

ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನ.1 ರಂದು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ಫಾ.ರೆ.ವಿಕ್ಟರ್ ಡಿಸೋಜಾರವರು ಕನ್ನಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.


ಬಳಿಕ
ಅತಿಥಿಗಳಾಗಿದ್ದ ಶೀಲಾವತಿ ಕೊಳಂಬೆ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.
ಸಭಾಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಫಾ.ರೆ.ವಿಕ್ಟರ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಂದ ಸಮೂಹಗಾನ,ನೃತ್ಯ ಕಾರ್ಯಕ್ರಮ ನಡೆಯಿತು.


ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆ.ರೈ,ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಉಪಸ್ಥಿತರಿದ್ದರು.
ವಿದ್ಯಾರ್ಥಿ ಮೌರ್ಯ ಸ್ವಾಗತಿಸಿ,ಸಹಶಿಕ್ಷಕಿ ಜ್ಯೋತಿ ಜೆ ರೈ ನಿರೂಪಿಸಿ,ಸಾರಿಕಾ ವಂದಿಸಿದರು.
ಶಾಲಾ ಶಿಕ್ಷಕಿ ಉಷಾದೇವಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,ಶಿಕ್ಷಕರು,ಪೋಷಕರು ಉಪಸ್ಥಿತರಿದ್ದರು.