ನಾಲ್ಕೂರು: ಕೌದಿ ಕೌಶಲ್ಯ ಹೊಲಿಗೆ ತರಬೇತಿ ಸಮಾರೋಪ

0

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಪ್ರವರ್ತಕರು, ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು ಇದರ ವತಿಯಿಂದ ಸಂಜೀವಿನಿ ಒಕ್ಕೂಟದ ಗುತ್ತಿಗಾರು ಗ್ರಾಮ ಪಂಚಾಯಿತಿ ಮಟ್ಟದ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಮೂರು ದಿನಗಳ ಕಾಲ ಹಮ್ಮಿಕೊಂಡ ಕೌದಿ ಕೌಶಲ್ಯ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಗುತ್ತಿಗಾರಿನ ಪ.ಪಂಗಡ ಸಭಾಭವನದಲ್ಲಿ ನಡೆಯಿತು.


ಸಭಾಧ್ಯಕ್ಷತೆಯನ್ನು ನಾಲ್ಕೂರು ವಿ ಆರ್ ಡಿ ಎಫ್ ನ ಅಧ್ಯಕ್ಷ ಡಿ.ಆರ್. ಉದಯಕುಮಾರ್ ವಹಿಸಿದ್ದರು. ತರಬೇತಿ ಪಡೆದ ಸಂಘದ ಸದಸ್ಯರುಗಳಿಗೆ ಬ್ಯಾಂಕ್ ಆಫ್ ಬರೋಡ ಸುಬ್ರಮಣ್ಯ ಶಾಖೆಯ ವ್ಯವಸ್ಥಾಪಕರಾದ ಕೃಷ್ಣಪ್ರಸಾದ್ ಕೆ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಎಸ್ ಕೆ ಡಿ ಆರ್ ಡಿ ಪಿ ಯ ಮೇಲ್ವಿಚಾರಕರಾದ ಬಾಲಕೃಷ್ಣ ಕೆ, ಗುತ್ತಿಗಾರು ಗ್ರಾ. ಪಂ.ನ ಪಿಡಿಓ ಧನಪತಿ, ಸಂಜೀವಿನಿ ಒಕ್ಕೂಟದ ಕಾರ್ಯಕ್ರಮದ ಸಂಯೋಜಕಿ ಶ್ವೇತಾ, ಒಕ್ಕೂಟದ ಉಪಾಧ್ಯಕ್ಷ ಸವಿತ ಕುಳ್ಳಂಪಾಡಿ, ತರಬೇತಿದಾರರಾದ ಮನೋರಮ ಮುಚ್ಚಾರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಾಲ್ಕೂರು ವಿಜಯ ಗ್ರಾಮ ಸಮಿತಿಯ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ, ಗ್ರಂಥ ಪಾಲಕಿ ಅಭಿಲಾಷ ಕಾರ್ಯಕ್ರಮ ನಿರೂಪಿಸಿದರು.