ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಕನ್ನಡ ಧ್ವಜಾರೋಹಣ ನಡೆಸಿಕೊಟ್ಟರು. ಕಾಲೇಜಿನ ಉಪನ್ಯಾಸಕರು, ಕಛೇರಿ ಸಿಬ್ಬಂದಿಗಳು, ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ನಂತರ ಸರಕಾರದ ಸುತ್ತೋಲೆಯಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿ ಕನ್ನಡ ಗೀತೆಗಳ ಗಾಯನ ಕಾರ್‍ಯಕ್ರಮದಲ್ಲಿ ಪಾಲ್ಗೊಂಡರು. ಉಪನ್ಯಾಸಕ ಪುಷ್ಪರಾಜ್ ಕೆ ಕಾರ್‍ಯಕ್ರಮ ನಿರೂಪಿಸಿದರು.