ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ಎನ್ನೆoಪಿಯುಸಿ ಹುಡುಗರ ತಂಡ ರನ್ನರ್ಸ್

0


ಪ ಪೂ ಶಿಕ್ಷಣ ಇಲಾಖೆ ವತಿಯಿಂದ ಶಕ್ತಿ ಪ.ಪೂ ಕಾಲೇಜು ಮಂಗಳೂರು ಇಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿಸುಳ್ಯ ತಾಲೂಕನ್ನು ಪ್ರತಿನಿಧಿಸಿದ್ದ ನೆಹರು ಮೆಮೋರಿಯಲ್ ಪ. ಪೂ ಕಾಲೇಜು ಸುಳ್ಯ ಇಲ್ಲಿನ ಹುಡುಗರ ತಂಡ ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.
ಇವರಿಗೆ ಕ್ರೀಡಾ ತರಬೇತುದಾರರಾದ ನಾಗರಾಜ್ ನಾಯ್ಕ್ ಭಟ್ಕಳ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಭಾರ ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.