ಗಣೇಶ್ ನಾಯಕ್ ಪದವೀಧರ ಪ್ರಾಥಮಿಕ‌ ಶಾಲಾ ಶಿಕ್ಷಕರಾಗಿ ಆಯ್ಕೆ

0

ಪುತ್ತೂರು ತಾಲೂಕು ಕುರಿಯ ಗ್ರಾಮದ ನೆಕ್ಕರೆಯ ಗಣೇಶ ನಾಯಕ್ ಪಿ ರವರು 2022-23ನೇ ಸಾಲಿನ‌ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಜಂಕಾಡಿ ಇಲ್ಲಿಗೆ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಛೇರಿಯಿಂದ ನಿಯೋಜನೆ ಮೇರೆಗೆ ಆಯ್ಕೆಯಾಗಿರುತ್ತಾರೆ .ಇವರು ಸುಳ್ಯ ತಾಲೂಕಿನ ಸ.ಹಿ.ಪ್ರಾ‌.ಶಾಲೆ ಪಡ್ಪಿನಂಗಡಿ, ಪುತ್ತೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಹಂಟ್ಯಾರು ,ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ,ಸ.ಪ್ರ ದರ್ಜೆ ಕಾಲೇಜು ಬೆಟ್ಟಂಪಾಡಿ ಯ ಹಳೆವಿದ್ಯಾರ್ಥಿಯಾಗಿರುತ್ತಾರೆ .ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರಿನಲ್ಲಿ ಬಿ.ಇಡಿ ಶಿಕ್ಷಣವನ್ನು ಪೂರ್ಣಗೊಳಿಸಿರುವ ಇವರು ನೆಕ್ಕರೆ ರಾಮಕೃಷ್ಣ ನಾಯಕ್ ಮತ್ತು ಮಮತ ದಂಪತಿಗಳ ಪುತ್ರ. ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದಲ್ಲಿ ಶಿಕ್ಷಕರಾಗಿ,ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಏಳು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.