ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

0


ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ. ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ನೀರುಪಾಲಾದ ಯುವಕ.

ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನಿನ್ನೆ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದರೆಂದೂ, ಇಂದು ಅಲ್ಲಿ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರಪಾಲಾಗಿದ್ದು, ಇಂದು ಮೃತದೇಹ ಪತ್ತೆಯಾಯಿತೆಂದು ತಿಳಿದುಬಂದಿದೆ. ಮೃತದೇಹವನ್ನು ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

ಮೃತ ಬಿಪಿನ್ ತಂದೆ, ತಾಯಿ, ಸಹೋದರಿ ರಚನಾ ಚಿದ್ಗಲ್‌ರನ್ನು ಅಗಲಿದ್ದಾರೆ.