ಅರಂತೋಡು ಗ್ರಾ.ಪಂ.ಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ

0

ಶಾಸಕಿ ಭಾಗೀರಥಿ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಅರಂತೋಡು ಗ್ರಾಮ ಪಂಚಾಯತಿಗೆ ವಿಧಾ‌ನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನ.7ರಂದು ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ ಅವರ ಉಪಸ್ಥಿತಿಯಲ್ಲಿ ಗ್ರಾ.ಪಂ. ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅಡ್ತಲೆ ಅವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನ್ನೂರು, ಗ್ರಾ.ಪಂ. ನ್ಯಾಯ ಸಮಿತಿ ಅಧ್ಯಕ್ಷೆ ಶ್ವೇತ, ಅರಂತೋಡು – ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ವಿಶ್ರಾಂತ ಪ್ರಾಚಾರ್ಯ ಕೆ.ಆರ್.ಗಂಗಾಧರ್, ಬಿಜೆಪಿ ಮುಖಂಡರಾದ ಎಸ್.ಎನ್. ಮನ್ಮಥ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಶೈಲೇಶ್ ಅಂಬೆಕಲ್ಲು , ತಾ.ಪಂ. ಮಾಜಿ ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪ, ಶ್ರೀಮತಿ ಭಾರತಿ ಪುರುಷೋತ್ತಮ ಉಳುವಾರು, ಕೆ.ಆರ್. ಪದ್ಮನಾಭ, ಸೋಮಶೇಖರ ಪೈಕ, ಮಾಜಿ‌ ಜಿ‌.ಪಂ.ಸದಸ್ಯ ಸತೀಶ್ ನಾಯ್ಕ್, ಅಶ್ರಫ್ ಗುಂಡಿ, ನಗರ ಪಂಚಾಯತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸೇರಿದಂತೆ ನಗರ ಪಂಚಾಯತಿ ಸದಸ್ಯರುಗಳು, ಅರಂತೋಡು ತೊಡಿಕಾನ ಸಹಕಾರಿ ಸಂಘದ ನಿರ್ದೇಶಕರುಗಳು, ಗ್ರಾ.ಪಂ. ಸದಸ್ಯರುಗಳು ಇದ್ದರು.