ಸುಳ್ಯ ಸುದ್ದಿಬಿಡುಗಡೆ ದೀಪಾವಳಿ ವಿಶೇಷಾಂಕ -2023 ಬಿಡುಗಡೆ

0

ನೂತನ ತಹಶಿಲ್ದಾರ್ ಮಂಜುನಾಥ್ ಅವರಿಂದ ವಿಶೇಷಾಂಕ ಬಿಡುಗಡೆಗೊಳಿಸಿ ಶುಭಹಾರೈಕೆ

ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ವತಿಯಿಂದ ಹೊರತಂದ ದೀಪಾವಳಿ ವಿಶೇಷಾಂಕ – 2023ನ್ನು ಸುಳ್ಯದ ನೂತನ ತಹಶಿಲ್ದಾರ್ ಮಂಜುನಾಥ್ ಅವರು ಬಿಡುಗಡೆಗೊಳಿಸಿ, ಶುಭಹಾರೈಸಿದರು‌.

ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಪಿ. ಶಿವಾನಂದ ಅವರು ಅಧ್ಯಕ್ಷತೆ ವಹಿಸಿದ್ದರು. ದೀಪಾವಳಿ ವಿಶೇಷಾಂಕ ವಿಭಾಗದ ಸಂಪಾದಕರಾದ ದುರ್ಗಾಕುಮಾರ್ ನಾಯರ್ ಕೆರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಹಿರಿಯ ಸಹಕಾರಿ ಧುರೀಣರಾದ ನಿತ್ಯಾನಂದ ಮುಂಡೋಡಿ, ಸುಳ್ಯ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಎಸ್.ಐ. ಸರಸ್ವತಿ, ಗೂನಡ್ಕ ಶ್ರೀ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಸಂಚಾಲಕರಾದ ರುಕ್ಮಯ ದಾಸ್ ಅವರು ಶುಭಹಾರೈಸಿದರು‌.


ವೇದಿಕೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನ ವ್ಯವಸ್ಥಾಪಕರಾದ ಪ್ರಕಾಶ್ ನಾರಾಯಣ್, ಪತ್ರಿಕೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್, ಜಾಹೀರಾತು ವಿಭಾಗದ ಮುಖ್ಯಸ್ಥ ರಮೇಶ್ ನೀರಬಿದಿರೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಶ್ರೀಧರ ಕಜೆಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯದ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಸುದ್ದಿ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ , ಸುದ್ದಿ ಮಾಹಿತಿ ವಿಭಾಗದ ಮುಖ್ಯಸ್ಥ ಕೃಷ್ಣ ಬೆಟ್ಟ ಸೇರಿದಂತೆ ಸುದ್ದಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿ ವರದಿಗಾರರಾದ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಯಶ್ವಿತ್ ಕಾಳಮ್ಮನೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.