ಮದುವೆಗದ್ದೆ ಐಶ್ವರ್ಯ ಆತ್ಮಹತ್ಯೆ ಪ್ರಕರಣ

0

ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪತಿ ಮನೆಯವರ ಮತ್ತು ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಮದುವೆಗದ್ದೆಯ ಐಶ್ವರ್ಯ ಆತ್ಮಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಡೆತ್ ನೋಟ್ ಮತ್ತು ತಾಯಿಯ ದೂರಿನ‌ ಮೇರೆಗೆ ಕೇಸು ದಾಖಲಾಗಿದ್ದ ಹತ್ತು ಆರೋಪಿಗಳ ಪೈಕಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಹತ್ತು ಆರೋಪಿಗಳ ಪೈಕಿ ಐಶ್ವರ್ಯ , ಪತಿ ರಾಜೇಶ್, ಮಾವ ಗಿರಿಯಪ್ಪ ಕಾಪಿಲ, ಅತ್ತೆ ಸೀತಾ, ಮೈದುನ ವಿಜಯ್ ಮತ್ತು ಅವರ ಪತ್ನಿ ತಸ್ಮಯ್ ಅವರನ್ನು ಬಂಧಿಸಲಾಗಿತ್ತು.

ಉಳಿದ ಆರೋಪಿಗಳ ಪೈಕಿ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ ಅವರ ಪುತ್ರಿ ಲಿಪಿ ಅವರಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳ ಪರವಾಗಿ ನ್ಯಾಯವಾದಿ ರಾಜೇಶ್ ಕೆ.ಎಸ್.ಎನ್. ವಾದಿಸಿದ್ದರು.