ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ 2023-24ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟವು ನ.18ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೈದಾನದಲ್ಲಿ ಜರುಗಿತು.

ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ನಾಯಕ ಜಗದೀಶ್ ಕುಂಬ್ಳೆ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು‌.


ಕ್ರೀಡಾಕೂಟವನ್ನು ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ.ಆರ್. ಅವರು ಉದ್ಘಾಟಿಸಿ, ಶುಭಹಾರೈಸಿದರು‌.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ‌ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ.ಸೀತಾರಾಮ ಹಾಗೂ ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್, ಕ್ರೀಡಾ ಸಂಚಾಲಕ ಅಶೋಕ ಅಡ್ಕಾರು, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಸೌಮ್ಯ ಕದಿಕಡ್ಕ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ, ಜಿ.ಜಿ. ನಾಯಕ್ ಸುಳ್ಯ, ಶಿಶು ಮಂದಿರದ ಅಧ್ಯಕ್ಷ ಯಶ್ವಿತ್ ಕಾಳಮನೆ, ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಗೋಪಾಲ ರಾವ್, ಆಡಳಿತ ಮಂಡಳಿಯ ಸದಸ್ಯರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಹೇಮಂತ್ ಕಾಮತ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಉಪಸ್ಥಿತರಿದ್ದರು.


ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಸಹಶಿಕ್ಷಕ ಶಶಿಧರ ಎಂ‌. ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಪಾವನ ಕಾರ್ಯಕ್ರಮ ನಿರೂಪಿಸಿದರು.