ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಪತ್ರಕರ್ತರ ವೇದಿಕೆ ಬೆಂಗಳೂರು, ಡಾ.ಸಿದ್ಧಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡಲ್ಪಟ್ಟ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಪ್ರಸಿದ್ಧ ತಾರಸಿಯಲ್ಲಿ ಭತ್ತದ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರು ಭಾಜನರಾಗಿದ್ದು ನ.16ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಈಗಾಗಲೇ ಹಲವು ಪ್ರಶಸ್ತಿ ಪ್ರಧಾನಗಳಿಗೆ ಪಾತ್ರರಾಗಿರುವ ಕೃಷ್ಣಪ್ಪ ಗೌಡರು ಶಿಕ್ಷಣ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಮಾರಮ್ಮ ಟೆಂಪಲ್ ಟ್ರಸ್ಟ್‌ನ ಧರ್ಮದರ್ಶಿ ವಿ.ಎಸ್.ಕೃಷ್ಣ, ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಚಿಂತಕ ಬಸವರಾಜ್ ಮಾಲಗತ್ತಿ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್, ಡಾ.ಸಿದ್ಧಯ್ಯ ಪುರಾಣಿಕ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ್ ಬಾದವಾಡಗಿ ಇನ್ನಿತರು ಗಣ್ಯರು ಉಪಸ್ಥಿತರಿದ್ದರು.