ಬೆಂಗಳೂರಿನಲ್ಲಿ ಕಂಬಳ : ಸುಳ್ಯದ ನಾಯಕರ ಭೇಟಿ

0

ಪುತ್ತೂರು ಶಾಸಕ ಅಶೋಕ್ ರೈಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಂಬಳ ಉತ್ಸವ ನ.25 ಮತ್ತು 26 ರಂದು ನಡೆಯಲಿದ್ದು, ಸುಳ್ಯದ ನಾಯಕರು ಕಂಬಳ ನಡೆಯುವ ಜಾಗವಾದ ಅರಮನೆ ಮೈದಾನಕ್ಕೆ ಭೇಟಿ‌ ನೀಡಿದ್ದಾರೆ.

ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೆ.ಎಫ್.ಡಿ.ಸಿ. ಮಾಜಿ ಅಧ್ಯಕ್ಷ ಎಸ್.ಎನ್. ಮನ್ಮಥ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಸಂಶುದ್ದೀನ್, ಜಿ.ಪಂ. ಮಾಜಿ ಸದಸ್ಯ ಭರತ್ ಮುಂಡೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷ ಪಿ.ಎಸ್ ಗಂಗಾಧರ್ ಸೇರಿದಂತೆ ಇತರರು ಇದ್ದರು.