ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಮೂವರಿಗೆ ಗೌರವಾರ್ಪಣೆ

0

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಿನ್ನೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ನಾಲ್ಕನೇ ಜಿಲ್ಲಾ ಸಮ್ಮೇಳನದಲ್ಲಿ ಸುಳ್ಯ ತಾಲೂಕಿನ ಮೂವರು ಪತ್ರಕರ್ತರನ್ನು ಸನ್ಮಾನಿಸಲಾಯಿತು. ಹಿರಿಯ ಮತ್ತು ಸಾಧಕ ಪತ್ರಕರ್ತರ ನೆಲೆಯಲ್ಲಿ ಸುಳ್ಯದ ಹೊಸ ದಿಗಂತ ವರದಿಗಾರ ಜಯಪ್ರಕಾಶ್ ಕುಕ್ಕೇಟಿ , ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ , ವಿಜಯ ಕರ್ನಾಟಕ ಮಂಗಳೂರು ಬ್ಯೂರೋ ದಲ್ಲಿ ಹಿರಿಯ ಉಪ ಸಂಪಾದಕರಾಗಿರುವ ಕೃಷ್ಣ ಕೋಲ್ಚಾರು ಅವರನ್ನು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು , ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಉಪ ಕುಲಪತಿ ಡಾ. ಜಯರಾಜ್ ಅಮೀನ್ ಸನ್ಮಾನಿಸಿದರು. ಸುಳ್ಯದಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ , ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ,ಕೋಶಾಧಿಕಾರಿ ಪ್ರಜ್ಞಾ ಎಸ್. ನಾರಾಯಣ್ ಅಚ್ರಪ್ಪಾಡಿ , ಮಾಜಿ ಅಧ್ಯಕ್ಷರುಗಳಾದ ಗಂಗಾಧರ ಮಟ್ಟಿ , ಕೃಷ್ಣ ಬೆಟ್ಟ, ಮುರಳೀಧರ ಅಡ್ಡನಪಾರೆ, ಪದ್ಮನಾಭ ಮುಂಡೋಕಜೆ ಅಲ್ಲದೇ ಪದ್ಮನಾಭ ಪರಿವಾರಕಾನ, ಗ್ರೀಷ್ಮಾ ಸುಳ್ಯ ಭಾಗವಹಿಸಿದ್ದರು.