ನ.30: ಅರಂತೋಡು: ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ – ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

0

ಅರಂತೋಡು ಸ.ಹಿ‌.ಪ್ರಾ.ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ , ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ , ದಾನಿಗಳಿಂದ ನೀಡಲ್ಪಟ್ಟ ಸವಲತ್ತುಗಳ ಉದ್ಘಾಟನೆ ಹಾಗೂ ನಿವೃತ್ತ ಶಿಕ್ಷಕಿಯವರ ಬೀಳ್ಕೊಡುಗೆ ಕಾರ್ಯಕ್ರಮವು ನ.30ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ದಿ. ಯು.ಡಿ. ಶೇಖರ್ ಸ್ಮರಣಾರ್ಥ ಅವರ ಪತ್ನಿ ಶ್ರೀಮತಿ ಗೀತಾ ಶೇಖರ್ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಸಭಾವೇದಿಕೆಯನ್ನು ಶಾಸಕರು ಉದ್ಘಾಟಿಸಲಿದ್ದಾರೆ.

ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾವತಿ ಅವರನ್ನು ನಿವೃತ್ತ ಶಿಕ್ಷಕ ಕೆ.ಆರ್. ಗಂಗಾಧರ ಅವರು ಸನ್ಮಾನಿಸಲಿದ್ದಾರೆ.‌
ದಿ.‌ಅಡ್ಕಬಳೆ ದೇವಪ್ಪ ಗೌಡರ ಸ್ಮರಣಾರ್ಥ ಅವರ ಮಕ್ಕಳ ಕೊಡುಗೆ ಸಿ.ಸಿ.ಟಿ.ವಿ.ಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಉದ್ಘಾಟಿಸಲಿದ್ದಾರೆ.
ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭವಾನಿ, ಗ್ರಾ.ಪಂ. ಸದಸ್ಯರಾದ ಶಿವಾನಂದ ಕುಕ್ಕುಂಬಳ, ಕು. ಶ್ವೇತ ಅರಮನೆಗಯ, ಶ್ರೀಮತಿ ಮಾಲಿನಿ ವಿನೋದ್, ಪುಷ್ಪಾಧರ ಕೊಡೆಂಕಿರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಎಚ್.ಬಿ., ಅರಂತೋಡು -ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ‌.ಎಂ. ಶಹೀದ್, ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಸಭಾ ವೇದಿಕೆ ದಾನಿ ಶ್ರೀಮತಿ ಗೀತಾ ಶೇಖರ್ , ವಲಯ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಸಿ.ಸಿ.ಟಿ.ವಿ. ದಾನಿ ಶ್ರೀಮತಿ ಜಾನಕಿ , ಸ್ಥಳದಾನಿ ಜನಾರ್ದನ ಕಲ್ಲುಮುಟ್ಲು ಉಪಸ್ಥಿತರಿರಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ವಿಠಲ ನಾಯಕ್ ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ ಜರುಗಲಿದೆ.