ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು ನ.೨೭ ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಸುಳ್ಯ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಾಮೋದರ ಎನ್. ಕಾಲೇಜಿನ ಸಂವಿಧಾನ ರಚನೆಯ ಚರಿತ್ರೆ, ಸಂವಿಧಾನದ ಮಹತ್ವದ ಕುರಿತಾಗಿ ಮಾತನಾಡಿದರು. ಕಾಲೇಜಿನ ಎನ್.ಎನ್.ಎಸ್ ಅಧಿಕಾರಿ ಶ್ರೀಮತಿ ಕಲಾವತಿ ಎಮ್. ಹಾಗೂ ಕಾನೂನು ನೆರವು ಸಮಿತಿಯ ಸಂಯೋಜಕಿ ನಯನಾ ಪಿ.ಯು. ಉಪಸ್ಥಿತರಿದ್ದರು. ಶ್ರೀಮತಿ ಕಲಾವತಿ ಸ್ವಾಗತಿಸಿ, ಶ್ರೀಮತಿ ನಯನಾ ಪಿ.ಯು ವಂದಿಸಿದರು. ಉಪನ್ಯಾಸಕ ರಂಜನ್ ಕೆ.ಎನ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.