ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಾರ್ಷಿಕ ಶಿಬಿರ ಉದ್ಘಾಟನೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ನ.30 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಇಲ್ಲಿ ಉದ್ಘಾಟನೆ ನೆರೆವೇರಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾl ದಿನೇಶ ಪಿ ಟಿ ವಹಿಸಿದ್ದರು. ವೇದಿಕೆಯಲ್ಲಿ ‌ಕೊಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಸುಭಾಷ್ ಶೆಟ್ಟಿ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಐ.ಕ್ಯೂ. ಎ.ಸಿ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ, ಪ್ರಾಥಮಿಕ ಶಾಲೆ ಕೊಯ್ಲಾದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ ಗೌಡ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶ್ರೀಮತಿ ನಮಿತಾ, ರಾಷ್ಟ್ರೀಯ ಸೇವಾ ಯೋಜನೆಯಾ ಘಟಕದ ನಾಯಕರುಗಳಾದ, ನಿತೀಶ್ ಕೆ.ಯು, ನವ್ಯಶ್ರೀ ಪಿ.ಎಚ್, ಸಂದೀಪ್ ಕುಮಾರ್, ಹೃತಿಕ್ ಸಿಎ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊಯಿಲಾ ಮಾಜಿ ಅಧ್ಯಕ್ಷರಾದ ಹರ್ಷಿತ್ ಕುಮಾರ್, ಗ್ರಾಮ ಪಂಚಾಯತ್ ಅಲಂಕಾರು ಉಪಾಧ್ಯಕ್ಷರಾದ ರವಿ ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ , ಕೊಯ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂದೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಡಬ ತಾಲೂಕು ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ. ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಜಾತ ಎಂ. ಧನ್ಯವಾದ ಸಮರ್ಪಿಸಿದರು. ಸ್ವಯಂ ಸೇವಕಿ ಕಲ್ಪನಾ ವೈ ಕಾರ್ಯಕ್ರಮ ನಿರೂಪಿಸಿದರು.