ಗುತ್ತಿಗಾರು:ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಆಶ್ರಯದ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

0

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ದೇವಿ ಸಿಟಿ ಸಂಕೀರ್ಣದ ಒಳ ಕ್ರೀಡಾಂಗಣದಲ್ಲಿ ಇಂದು ಆರಂಭ ಗೊಂಡಿತು.

ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ, 8ನೇ ತರಗತಿ ಬಾಲಕರ, ಪ್ರೌಢಶಾಲಾ ಬಾಲಕ-ಬಾಲಕಿಯರ, ಪದವಿಪೂರ್ವ ಕಾಲೇಜು ಬಾಲಕಿಯರ, ಹಾಗೂ ಪದವಿ ಕಾಲೇಜು ಬಾಲಕಿಯರ ಹಾಗೂ ಸಾರ್ವಜನಿಕ ಪುರುಷರ 65 ಕೆಜಿ. ಕಬಡ್ಡಿ ಪಂದ್ಯಾಟ ಇದಾಗಿದ್ದು ದೇವಿ ಸಿಟಿ ಕಾಂಪ್ಲೆಕ್ಸ್ ನ ಮಾಲಕ ದೇವಿಪ್ರಸಾದ್ ಚಿಕ್ಮುಳಿ ಹಾಗೂ ಅವರ ತಂದೆ ದೊಡ್ಡಣ್ಣ ಗೌಡ ಚಿಕ್ಮುಳಿ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ಮೋಹನ್ ದಾಸ್ ಶಿರಾಜೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಾಯಿಲಪ್ಪ ಗೌಡ ಕೊಂಬೆಟ್ಟು, ಕೋಶಾಧಿಕಾರಿ ನಿರಂತ್ ದೇವಸ್ಯ, ಉಪಾಧ್ಯಕ್ಷರಾದ ಪ್ರಮೋದ್ ಮೆಟ್ಟಿನಡ್ಕ, ಗಿರಿಪ್ರಸಾದ್ ಪಾರೆಪ್ಪಾಡಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.