ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ಕ್ರೀಡೋತ್ಸವ

0

ಬಿ.ಎಂ.ಎಸ್.ಸಂಯೋಜಿತ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಕ್ರೀಡೋತ್ಸವವು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ದಂತವೈದ್ಯರಾದ ಡಾ.ವಿದ್ಯಾಶಾರದ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಉಪಸ್ಥಿತರಿದ್ದರು. ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ ಸ್ವಾಗತಿಸಿದರು.

ಸುರೇಂದ್ರ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ ವಂದಿಸಿದರು.
ಸಂಘದ ಎಲ್ಲಾ ಪದಾಧಿಕಾರಿಗಳು ಕುಟುಂಬ ಸಮೇತ ಕ್ರೀಡೋತ್ಸವದಲ್ಲಿ ಭಾಗವಹಿಸಿದರು.