ಮೊಗರ್ಪಣೆ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರವಾಹನ ನಡುವೆ ಅಪಘಾತ

0

ದ್ವಿಚಕ್ರ ವಾಹನ ಸವಾರನ ಕಾಲಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯ ಮೊಗರ್ಪಣೆ ಸಮೀಪ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರನ ಕಾಲಿಗೆ ಗಂಭೀರ ಗಾಯವಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾದ ಘಟನೆ ಡಿ.5 ರಂದು ತಡ ರಾತ್ರಿ ಸಂಭವಿಸಿದೆ.

ಪೆರಾಜೆ ನಿವಾಸಿ ಆಂಬುಲೆನ್ಸ್ ಚಾಲಕ ಅಝರುದ್ದಿನ್ ಎಂಬ ಯುವಕ ಹಳೆಗೇಟು ಪೆಟ್ರೋಲ್ ಬಂಕಿಗೆ ತನ್ನ ಬೈಕಿನಲ್ಲಿ ಹೋಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಮೊಗರ್ಪಣೆ ವೆಂಕಟರಮಣ ಸೊಸೈಟಿಯ ತಿರುವು ಬಳಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಅಝರುದ್ದೀನ್ ರವರ ಬಲಕಾಲು ಮತ್ತು ಹಣೆಯ ಭಾಗಕ್ಕೆ ಗಾಯವಾಗಿದ್ದು ಸ್ಥಳೀಯರು ಆತನನ್ನು ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಳ್ಯ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.