ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ರೈ‌ ಉಬರಡ್ಕ

0

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಮಿತಿ ಸಭೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಸಮಿತಿಗಳನ್ನು ಪುನರ್ ರಚಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರನ್ನಾಗಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಹರೀಶ್ ರೈ ಉಬರಡ್ಕ ಅವರನ್ನು ನೇಮಿಸಲಾಗಿದೆ.

ಕಳೆದ ನಾಲ್ಕು ಅವಧಿಗಳಲ್ಲಿ‌ ಗ್ರಾಮ ಪಂಚಾಯತ್ ಸದಸ್ಯರಾಗಿ, ಮೂರು ಅವಧಿಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹರೀಶ್ ರೈಯವರು ಸಹಕಾರಿ ಸಂಘದ ನಿರ್ದೇಶಕರಾಗಿ ಹಾಗೂ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಗಳು ಸ್ಥಳೀಯ ಸ್ವಯಂ ಸರಕಾರಗಳಾಗಿ ಕಾರ್ಯನಿರ್ವಹಿಸುವಂತಹ ವಾತಾವರಣವನ್ನು ಸೃಷ್ಟಿ ಮಾಡುವ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ಯ ಕರ್ನಾಟಕ ಅಭಿಯಾನವನ್ನು ಪರಿಣಾಮಕಾರಿಯಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಸಮಿತಿಗಳನ್ನು ಪುನರ್ ರಚಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.