ಕುಕ್ಕೆ ಶ್ರೀ ದೇವಳದಲ್ಲಿ ಚಂಪಾಷಷ್ಠಿ ಜಾತ್ರಾ ಪ್ರಯುಕ್ತ ಭಜನೋತ್ಸವ ಆರಂಭ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷ್ಠಿ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಅಖಂಡ ಭಜನೋತ್ಸವ ಇಂದು ಆರಂಭವಾಯಿತು. ಇಂದು ಸೂರ್ಯೋದಯದಿಂದ ಇಂದು ರಾತ್ರಿ 10 ತನಕ ಶ್ರೀ ದೇವಳದ ಧರ್ಮಸಮ್ಮೇಲನ ಮಂಟಪದಲ್ಲಿ ಭಜನೋತ್ಸವ ನಡೆಯಲಿದೆ. ಶ್ರೀ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ದೀಪ ಬೆಳಗಿಸಿ ಡಾ.ನಿಂಗಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ವನಜಾ.ವಿ.ಭಟ್, ಶೋಭಾ ಗಿರಿಧರ್, ಗಿರೀಶ್ ಆಚಾರ್ಯ ಪೈಲಾಜೆ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್ , ರಾಜಲಕ್ಷ್ಮಿ ಶೆಟ್ಟಿಗಾರ್, ಯೋಗೀಶ್.ಎಂ.ವಿಟ್ಲ, ಮುಖ್ಯಗುರು ಕೆ.ಯಶವಂತ ರೈ,
ಬಳಿಕ ವಿವಿಧ ತಂಡಗಳಿಂದ ಭಜನೆ ಆರಂಭಗೊಂಡಿತು.