ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವಕ್ಕೆ ಚಾಲನೆ

0

ಮುಂಜಾನೆ 7.47ರ ಧನುರ್ಲಗ್ನ ಶುಭ ಮುಹೂರ್ತದಲ್ಲಿ ರಾಮ ಲಕ್ಷಣ ಕೊಪ್ಪರಿಗೆ ಏರುವುದರೊಂದಿಗೆ ಷಷ್ಠಿ ಉತ್ಸವ ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವಕ್ಕೆ ಇಂದು ಚಾಲನೆ ದೊರೆತಿದೆ.

ಬೆಳಗ್ಗೆ ಸಮಯ 7.47ರ ಧನುರ್ಲಗ್ನ ಶುಭ ಮುಹೂರ್ತದಲ್ಲಿ ರಾಮ ಲಕ್ಷಣ ಕೊಪ್ಪರಿಗೆ ಏರುವುದರೊಂದಿಗೆ ಶ್ರೀ ಸುಬ್ರಮಣ್ಯ ದೇವರ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಾರಂಭಗೊಂಡಿದೆ. ಕೊಪ್ಪರಿಗೆ ಏರುವ ಮೂಲಕ ಷಷ್ಠಿ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ರಾಮ – ಲಕ್ಷ್ಮಣ ಎಂಬ ಜೋಡಿ ಅನ್ನದ ಕೊಪ್ಪರಿಗೆಗೆ ವಿಶೇಷ ಪೂಜೆ ಸಲ್ಲಿಸಿ ಎರಡು ಒಲೆಗಳ ಮೇಲೆ ಅದನ್ನು ಏರಿಸಲಾಯಿತು. ಕೊಪ್ಪರಿಗೆಯಲ್ಲಿ ಬೆಯ್ದ ಅನ್ನ ಪ್ರಸಾದ ವಿತರಣೆ ನಡೆಯಲಿದೆ.


ದೇವಸ್ಥಾನದ ಅರ್ಚಕರು ಕೊಪ್ಪರಿಗೆ ಏರುವ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ಸಿಬ್ಬಂದಿ ಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.