ಆಲೆಟ್ಟಿ: ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಭಜನಾ ಸಂಕೀರ್ತನೆ

0

ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀ ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಅಂಗವಾಗಿ ತಂತ್ರಿಯವರಿಂದ ವಿವಿಧ ವೈದಿಕ ಕಾರ್ಯಕ್ರಮ ಇಂದು ಬೆಳಗ್ಗೆ ಪ್ರಾರಂಭಗೊಂಡಿತು.

ಕ್ಷೇತ್ರದಲ್ಲಿ ಬಿ.ಶಂಕರನಾರಾಯಣ ಕಡಮಣ್ಣಾಯ ಬಂಬ್ರಾಣ ತಂತ್ರಿವರ್ಯರ ನೇತೃತ್ವದಲ್ಲಿ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷ ಬಲಿ, ತಂಬಿಲ ಸೇವೆ ವೈದಿಕ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.

ವಾರ್ಷಿಕ ಮಹೋತ್ಸವದ ಅಂಗವಾಗಿ ಬೆಳಿಗ್ಗಿನಿಂದ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರಿಂದ ನಿರಂತರ ಭಜನಾ ಸಂಕೀರ್ತನೆಯು ನಡೆಯಿತು. ಸಮಿತಿಯ ಗೌರವಾಧ್ಯಕ್ಷ ರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸ್ವಾಗತಿಸಿದರು.