ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ

0

ವರಣನ ಆರ್ಭಟ ಲೆಕ್ಕಿಸದೆ ವೈಭವೀಕರಿಸಿದ ನೃತ್ಯ ಭಜನೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ದೇವರ ಲಕ್ಷದೀಪೋತ್ಸವ ರಾತ್ರಿ ನಡೆಯುತಿದ್ದು ಮಳೆಯ ಮಧ್ಯೆಯೂ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ ನಡೆಯಿತು.. 2000 ಕ್ಕೂ ಅಧಿಕ ಮಂದಿ ಭಜನೆಯಲ್ಲಿ ಪಾಲ್ಗೊಂಡರು.

ಚಂದ್ರಶೇಖರ ತಳೂರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಎ.ಸಿ ಗಿರೀಶ್ ನಂದನ್, ಕಾರ್ಯನಿರ್ವಾಹಣಾಧಿಕಾರಿ ಡಾl ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದ್ದು ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ.