ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಪನ್ನ

0

ಕಾರ್ತಿಕ ಮಾಸದ ಪ್ರಯುಕ್ತ ನಿರಂತರವಾಗಿ ಒಂದು ತಿಂಗಳ ಕಾಲ ಶ್ರೀ ಮಹಾವಿಷ್ಣು ದೇವರ ಸನ್ನಿಧಿಯಲ್ಲಿ ಮೊಳಗಿದ ಭಜನಾ ಸೇವೆ

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ಸನ್ನಿಧಾನದಲ್ಲಿ ಒಂದು ತಿಂಗಳುಗಳ ಕಾಲ ನಿರಂತರವಾಗಿ ಜರುಗಿದ ಕಾರ್ತಿಕ ದೀಪೋತ್ಸವವು ಡಿ.12ರಂದು ರಾತ್ರಿ ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ, ಮಂಗಳಾಚರಣೆಯ ಮೂಲಕ ಸಂಪನ್ನಗೊಂಡಿತು.

ಕಾರ್ತಿಕ ಮಾಸದ ಪ್ರಯುಕ್ತ ಕಳೆದ ನ.13ರಿಂದ ಪ್ರಾರಂಭಗೊಂಡಿದ್ದ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಸುಳ್ಯ ತಾಲೂಕಿನ ವಿವಿಧ ಭಜನಾ ಮಂಡಳಿಯವರಿಂದ ಪ್ರತಿದಿನ ಸಾಯಂಕಾಲ ಭಜನೆ, ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ ಜರುಗಿತು.
ಡಿ.12ರಂದು ರಾತ್ರಿ ಭಜನಾ ಸೇವೆ ನಡೆದು ದೀಪಸ್ಥಂಭದಲ್ಲಿ ದೀಪ ಬೆಳಗಿ , ಮಂಗಳಾಚರಣೆ, ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಕಾರ್ತಿಕ ದೀಪೋತ್ಸವವು ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ‌.ಕೆ. ಉಮೇಶ್ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರುಗಳು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.