ಕೆವಿಜಿ ವಿದ್ಯಾಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಆಗ್ರಹಿಸಿ ಡಾ. ರೇಣುಕಾಪ್ರಸಾದ್ ಕೆ.ವಿ. ಉಸ್ತುವಾರಿಯ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಂದ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ

0


ಕೆವಿಜಿ ವಿದ್ಯಾಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಆಗ್ರಹಿಸಿ ಡಾ.ರೇಣುಕಾಪ್ರಸಾದ್ ಕೆ.ವಿ. ಅವರ ಉಸ್ತುವಾರಿಗೊಳಪಟ್ಟ ಕೆವಿಜಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಸಿದ್ದಾರೆ.

ಕೆವಿಜಿ ಡೆಂಟಲ್ ಕಾಲೇಜು ಬಳಿ ಸೇರಿದ ಪ್ರತಿಭಟನಾಕಾರರು ಮೆರವಣಿಗೆಯ ಮೂಲಕ ತಾಲೂಕು ಕಚೇರಿ ಬಳಿಗೆ ಬಂದಿದ್ದು, ಅಲ್ಲಿ ಸಭೆ ನಡೆಸುತ್ತಿದ್ದಾರೆ.


ಕೆವಿಜಿ ಡೆಂಟಲ್ ಕಾಲೇಜು, ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.