ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಇಕ್ಬಾಲ್ ಎಲಿಮಲೆಯವರಿಗೆ ಸನ್ಮಾನ

0

ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಐ ಇಕ್ಬಾಲ್ ಎಲಿಮಲೆಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈಶ್ವರ ಮಂಗಲದಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘದ ಶಾಖೆಯನ್ನು ತೆರೆಯಲು ಕಾರಣಕರ್ತರಾದ ಮೊಹಮ್ಮದ್ ಇಕ್ಬಾಲ್ ಎಲಿಮಲೆ ರವರನ್ನು ಕರ್ನಾಟಕ ರಾಜ್ಯ ರೈತ ಸಂಘ (ರಿ.)ಬೆಂಗಳೂರು ಇದರ ರಾಜ್ಯ ಕಾರ್ಯದರ್ಶಿ ಕೆ ಎಚ್ ಮೊಹಮ್ಮದ್ ಈಶ್ವರ ಮಂಗಲರವರು ಅಲ್ಪಸಂಖ್ಯಾತರ ಸಹಕಾರ ಸಂಘದ ಈಶ್ವರಮಂಗಲ ಶಾಖಾ ಕಛೇರಿಯಲ್ಲಿ ಸನ್ಮಾನಿಸಿ ಸಂಘದ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಮುಖಂಡರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಉದ್ಯಮಿಗಳಾದ ಖಾದರ್, ಹನೀಫ್ ಮೆತಡ್ಕ,ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಸಿಬ್ಬಂದಿ ಅಬುಸಾಲಿ ಮೊದಲಾದವರು ಉಪಸ್ಥಿತರಿದ್ದರು.