ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಚಂಪಾಷಷ್ಠಿ ಮಹೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಡಿ.18ರಂದು ಜರುಗಿತು.

ಬೆಳಿಗ್ಗೆ ದೇವಾಲಯದಲ್ಲಿ ಶ್ರೀ ಗಣಪತಿ ಹೋಮ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ, ಮಧ್ಯಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.

ರಾತ್ರಿ 7ರಿಂದ ದೀಪಾರಾಧನೆ, ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ಜರುಗಿತು.

ಈ ಸಂದರ್ಭದಲ್ಲಿ ದೇವಾಲಯದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಶರತ್ ಅಡ್ಕಾರು, ಸೇರಿದಂತೆ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.