ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣ : ಕೊಲೆ ಶಂಕೆ

0


ಮರ್ಕಂಜದ ಸೇವಾಜೆ ಎಂಬಲ್ಲಿ ನಡೆದ ಘಟನೆ


ಮರ್ಕಂಜದ ಸೇವಾಜೆ ಎಂಬಲ್ಲಿ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು ಕಂಡು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರ ಸಹೋದರ ಮತ್ತು ತಂದೆ ಕೆಲವು ಸಮಯಗಳ ಹಿಂದೆ ನಿಧನರಾಗಿದ್ದರು.