ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ 47ನೇ ವರ್ಷದ ಏಕಾಹ ಭಜನೆ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ 47ನೇ ವರ್ಷದ ಏಕಾಹ ಭಜನೆಯು ಡಿ.23ರಂದು ಪ್ರಾತ:ಕಾಲ ದೀಪಪ್ರತಿಷ್ಠೆಯೊಂದಿಗೆ ಪ್ರಾರಂಭಗೊಂಡಿತು.

ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರು ಧಾರ್ಮಿಕ ವಿದಿ ವಿಧಾನ ನೆರವೇರಿಸಿದರು.
ಬೆಳಿಗ್ಗೆ ನಾಗತಂಬಿಲ, ಮಧ್ಯಾಹ್ನ ಪೂಜೆ, ಸಂಜೆ ಶ್ರೀ ಗುರುರಾಘವೇಂದ್ರ ಸ್ವಾಮಿಗೆ ವಿಶೇಷ ಅಲಂಕಾರ ಪೂಜೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದ್ದು, ಡಿ.24ರಂದು ಬೆಳಿಗ್ಗೆ ಮಂಗಳಾಚರಣೆ, ದೀಪ ವಿಸರ್ಜನೆಯೊಂದಿಗೆ ಕೊನೆಗೊಳ್ಳಲಿದೆ.
ಈ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.