ಕೋಟೆಮುಂಡುಗಾರು: ಸಾರ್ವಜನಿಕ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

0

ಯುವಕ ಮಂಡಲ ರಿ.ಕಳಂಜ ವತಿಯಿಂದ ಡಿ.31 ರಂದು ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟ ಕೋಟೆಮುಂಡುಗಾರಿನಲ್ಲಿ ನಡೆಯುತ್ತಿದ್ದು ಪಂದ್ಯಾಟವನ್ನು ನಿನಾದ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ವಸಂತ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ ವಹಿಸಿದ್ದರು. ಯುವಜನ ಸಂಯುಕ್ತ ಗೌರವಾಧ್ಯಕ್ಷ ತೇಜಸ್ವಿ ಕಡಪಳ, ಆರ್ಯಾಪು ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಮೋನಪ್ಪ ಕೋಡಿಯಡ್ಕ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಶಿವರಾಮ ಕಜೆಮೂಲೆ, ಕ್ರೀಡಾ ಕಾರ್ಯದರ್ಶಿ ಶಿವಪ್ರಸಾದ್ ಮುಂಡುಗಾರು ಇದ್ದರು. ಶಿವರಾಮ ಕಜೆಮೂಲೆ ಸ್ವಾಗತಿಸಿ, ಲಕ್ಷ್ಮೀಶ ಕಜೆಮೂಲೆ ವಂದಿಸಿದರು.