ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕೆ.ಟಿ.ವಿಶ್ವನಾಥರಿಗೆ ಗೌರವಾರ್ಪಣೆ

0

ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರವರಿಗೆ ಆಡಳಿತ ಮಂಡಳಿ ವತಿಯಿಂದ ಜ.5 ರಂದು ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ, ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ,ಚಂದ್ರ ಕೋಲ್ಚಾರ್, ಕೆ.ಸಿ ನಾರಾಯಣ ಗೌಡ, ಕೆ.ಸಿ.ಸದಾನಂದ, ಪಿ.ಎಸ್.ಗಂಗಾಧರ್,ದಾಮೋದರ ನಾರ್ಕೋಡು,ದಿನೇಶ್ ಮಡಪ್ಪಾಡಿ, ನಳಿನಿ ಸೂರಯ್ಯ, ಕೆ.ಎಸ್.ಜಯಲಲಿತಾ, ಲತಾ ಸದಾನಂದ ಮಾವಜಿ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.