ಆಲೆಟ್ಟಿ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪೂರ್ವ ಭಾವಿ ಸಭೆ

0

ಆಲೆಟ್ಟಿ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮುಂದಿನ ಫೆ.14 ರಿಂದ 18 ರ ತನಕ ನಡೆಯಲಿದ್ದು ಇದರ ಪೂರ್ವ ಭಾವಿ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ರವರ ಅಧ್ಯಕ್ಷತೆಯಲ್ಲಿ
ಜ.5 ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಶ್ರೀ ಉಳ್ಳಾಕುಲು ಚಾವಡಿ ನಿರ್ಮಾಣದ ಅಂತಿಮ ಹಂತದ ಕೆಲಸ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ವಾರ್ಷಿಕ ಜಾತ್ರೋತ್ಸವದ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು. ಚಾವಡಿಯ ನಿರ್ಮಾಣಕ್ಕೆ ಅವಶ್ಯವಿರುವ ಆರ್ಥಿಕ ಕ್ರೋಢೀಕರಣದ ಬಗ್ಗೆ ಚಿಂತನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಆರ್ಥಿಕ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ವ್ಯ.ಸ.ಸದಸ್ಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ, ಹರಿಪ್ರಸಾದ್ ಗಬ್ಬಲ್ಕಜೆ, ಸತೀಶ್ ಕುಂಭಕೋಡು, ಹರಿಪ್ರಸಾದ್ ಕಾಪುಮಲೆ,
ಶ್ರೀಮತಿ ಮಮತಾ ನಾರ್ಕೋಡು, ನಳಿನಿ ರೈ ಆಲೆಟ್ಟಿ, ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಉಪಾಧ್ಯಕ್ಷ ಸುಧಾಕರ ಆಲೆಟ್ಟಿ, ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ,
ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಸದಸ್ಯರಾದ ಲಕ್ಷ್ಮಣ ಆಚಾರ್ಯ ಪರಿವಾರ, ನವೀನ್ ಕುಮಾರ್ ಆಲೆಟ್ಟಿ,ನಾರಾಯಣ ರೈ ಆಲೆಟ್ಟಿ, ಮುಕುಂದ ನಾರ್ಕೋಡು,ಶಿಲ್ಪಿ ಜಯಕರ ಆಚಾರ್ಯ ಕುಂಬ್ರ ಮತ್ತಿತರರು ಉಪಸ್ಥಿತರಿದ್ದರು.