ಜ.15 ರಿಂದ ಜ.21 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

0

ಜ.16 : ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆ

ಜ.19 : ಬ್ರಹ್ಮರಥೋತ್ಸವ,ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವವು ಜ.15 ರಿಂದ ಪ್ರಾರಂಭಗೊಂಡು ಜ.21 ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜ.15 ರಂದು ಸಂಜೆ ಗಂಟೆ 6.00 ರಿಂದ ದೇವತಾ ಪ್ರಾರ್ಥನೆ,ಸ್ವಸ್ತಿಪುಣ್ಯಾಹವಾಚನ,ರಥ ಶುದ್ಧಿ ,ರಾಕ್ಷೋಘ್ನ ಹೋಮ,ವಾಸ್ತುಹೋಮ,ವಾಸ್ತುಪೂಜಾಬಲಿ ನಡೆಯಲಿದೆ.
ಶ್ರೀ ಗಣಪತಿ ದೇವರಿಗೆ ಮೂಡಪ್ಪ ಸೇವೆ,ಶ್ರೀ ದೇವಿಗೆ ದೊಡ್ಡ ರಂಗಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ಜ.16 ರಂದು ಬೆಳಿಗ್ಗೆ ಗಂಟೆ 7.00 ರಿಂದ ಮಹಾಗಣಪತಿ ಹೋಮ, ಬ್ರಹ್ಮರಥ ಶುದ್ದಿ ಕಲಶ,ಪೂರ್ವಾಹ್ನ ಗಂಟೆ 9.45 ರಿಂದ 10.10 ರ ಕುಂಭಲಗ್ನದ ಸುಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆ ಮತ್ತು ಪಲ್ಲಕ್ಕಿ ಸಮರ್ಪಣೆ ನಡೆಯಲಿದೆ.
ಮಧ್ಯಾಹ್ನ 12.30 ಕ್ಕೆ ಮಂಗಳಾರತಿ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ಬೆಳಿಗ್ಗೆ ಗಂಟೆ 10 .00 ಕ್ಕೆ ಜಾತ್ರೋತ್ಸವಕ್ಕೆ ಉಗ್ರಾಣ ಮುಹೂರ್ತ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ 7.00 ಕ್ಕೆ ದೇವತಾ ಪ್ರಾರ್ಥನೆ,ಧ್ವಜಾರೋಹಣ ನಡೆಯಲಿದೆ.
ನಂತರ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.
ಜ.16 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮದ್ಯಾಹ್ನ ಗಂಟೆ 12.00 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 5.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಪೇಟೆ ಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.ಜ.17 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮದ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ ,5.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಪೇಟೆ ಸವಾರಿ,ಮಹಾಪೂಜೆ,ಶ್ರೀ ಭೂತಬಲಿ ನಡೆಯಲಿದೆ.
ಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಲಿರುವುದು.
ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ,ಪಲ್ಲಕ್ಕಿ ಉತ್ಸವ,ವಸಂತ ಕಟ್ಟೆ ಪೂಜೆ,ನೃತ್ಯ ಬಲಿ,ಮಹಾಪೂಜೆ,ಶ್ರೀ ಭೂತಬಲಿ ನಡೆಯಲಿದೆ.
ಬ್ರಹ್ಮರಥ ಸಮರ್ಪಣೆ ಮತ್ತು ಪಲ್ಲಕ್ಕಿ ಸಮರ್ಪಣೆ
ಜ.19 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಗಂಟೆ 12.00 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ,ಪಲ್ಲಕ್ಕಿ ಉತ್ಸವ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಡೆ ಪೂಜೆ,ವ್ಯಾಘ್ರಚಾಮುಂಡಿ ದೈವ(ಪಿಲಿಭೂತ) ದ ಭಂಡಾರ ಬರುವುದು.
ಬ್ರಹ್ಮರಥೋತ್ಸವ,ಪೆರುವಾಜೆ ಬೆಡಿ ಪ್ರದರ್ಶನ ನಡೆಯಲಿದೆ.ರಾತ್ರಿ ಗಂಟೆ 10.30 ಕ್ಕೆ ಮಹಾಪೂಜೆ,ಶಯನೋತ್ಸವ,ಕವಾಟ ಬಂಧನ ನಡೆಯಲಿದೆ.
ಜ.20 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಕವಾಟೋದ್ಘಾಟನೆ,ಶ್ರ್ರೀ ದೇವರಿಗೆ ತೈಲಾಭಿಷೇಕ,ಪಂಚಾಮೃತಾಭಿಷೇಕ,ಸೀಯಾಳಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ ಗಂಟೆ 12.00 ಕ್ಕೆ ತುಲಾಭಾರ ಸೇವೆ,ಯಾತ್ರಾ ಹೋಮ,ಪ್ತಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ,ಅವಭೃತ ಸ್ನಾನ ಧ್ವಜಾವರೋಹಣ,ಮಹಾಪೂಜೆ,ಪ್ರಸಾದ ವಿತರಣೆ ನಂತರ ಉಳ್ಳಾಕುಲು,ಮೈಷಂತಾಯ,ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರ ತೆಗೆಯುವುದು.
ಜ.21 ರಂದು ಬೆಳಿಗ್ಗೆ ಮಹಾಗಣಪತಿ ಹೋಮ,ಕಲಶ ಪೂಜೆ,ಬೆಳಿಗ್ಗೆ ಗಂಟೆ 6.00 ಕ್ಕೆ ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ,ಪ್ರಸಾದ ವಿತರಣೆ ನಡೆಯಲಿರುವುದು.
ಮದ್ಯಾಹ್ನ ಗಂಟೆ 12.00 ರಿಂದ ಶ್ರೀ ದೇವರಿಗೆ ಸಂಪ್ರೋಕ್ಷಣೆ ,ಕಲಶಾಭಿಷೇಕ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ ನಡೆಯಲಿರುವುದು.
ಮದ್ಯಾಹ್ನ ಗಂಟೆ 12.15 ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿರುವುದು.
ಸಂಜೆ ಗಂಟೆ 7.00 ರಿಂದ ಶ್ರೀ ಕಲ್ಲುರ್ಟಿ,ಕಲ್ಕುಡ ದೈವದ ನೇಮೋತ್ಸವ ನಡೆಯಲಿದೆ.
ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಲ್ಲಾ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.