ಕಳಂಜದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

0

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ ಕಳಂಜ ವತಿಯಿಂದ 26 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜ.6 ರಂದು ನಡೆಯಿತು.
ರಾತ್ರಿ ಶ್ರೀ ಸತ್ಯನಾರಾಯಣ ದೇವರಿಗೆ ಮಹಾಮಂಗಳಾರತಿ ನಡೆಯಿತು.
ಬಳಿಕ ಪ್ರಸಾದ ವಿತರಣೆ ಮತ್ತು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ರಘುನಾಥ ರೈ ಕಳಂಜ,ಅಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು,ಕಾರ್ಯದರ್ಶಿ ಸತೀಶ್ ಕಳಂಜ, ಜತೆ ಕಾರ್ಯದರ್ಶಿ ಗಗನ್ ನಾಲ್ಗುತ್ತು, ಖಜಾಂಜಿ ರಾಜೇಶ್ ಅಮೀನ್ ಪಟ್ಟೆ,ಉಪಾಧ್ಯಕ್ಷ ರವೀಂದ್ರನಾಥ ರೈ ಗುರಿಕ್ಕಾನ ಮತ್ತು ಸರ್ವಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.