ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

0

ಪೆರಾಜೆ ಜ್ಯೋತಿ ಪ್ರೌಢಶಾಲೆ, ಜ್ಯೋತಿ ವಿದ್ಯಾ ಸಂಘ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಶಾಲಾ ಸಭಾಭವನದಲ್ಲಿ ಜ.8 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾದ ಡಾ.ಎನ್.ಎ. ಜ್ಞಾನೇಶ್ ವಹಿಸಿದ್ದರು.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ಕಾರ್ಯಕ್ರಮ ಉದ್ಘಾಟಿಸಿದರು.


ಜ್ಯೋತಿ ವಿದ್ಯಾ ಸಂಘದ ಸಂಚಾಲಕರಾದ ಹರಿಶ್ಚಂದ್ರ ಮುಡುಕಜೆ, ಗ್ರಾ. ಪಂ. ಸದಸ್ಯರಾದ ಭೂದೇವಿ ನಾಯಕ್, ಪ್ರವೀಣ್ ಮಜಿಕೋಡಿ, ಪೆರಾಜೆ ಶಾರದಾಂಬೋತ್ಸವ ಸಮಿತಿ ಅಧ್ಯಕ್ಷರಾದ ಪಿ.ಜಿ.ವೇದವ್ಯಾಸ ಭಟ್, ಪೆರಾಜೆ ಕ್ಲಸ್ಟರ್ ಸಿ.ಆರ್.ಪಿ. ಶ್ರೀಮತಿ ರೇಖಾ ಯು.ಎಸ್., ಶಾಲಾ ಸ್ಥಳದಾನಿಗಳಾದ ಶಕುಂತಲಾ ಉಮಾ ಸುಂದರ್ ರೈ, ಶಾಲಾ ಸ್ಥಾಪಕರಾದ ಪೂವಪ್ಪ ಮಾಸ್ತರ್, ನಿರ್ದೇಶಕರಾದ ರಾಜಗೋಪಾಲ ಆರ್‌.ಸಿ., ಪೋಷಕ ಸಮಿತಿ ಅಧ್ಯಕ್ಷೆ ವಿಧಾಕುಮಾರಿ ಬಂಗಾರ ಕೋಡಿ, ಶಾಲಾ ಮುಖ್ಯ ಶಿಕ್ಷಕರಾದ ಜಿ.ಆರ್.ನಾಗರಾಜ್, ಶಾಲಾ ನಾಯಕ ಪ್ರಜ್ವಲ್ ಪಿ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳೆದ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಶಾಲಾ ಶಿಕ್ಷಕರುಗಳಾದ ಶ್ರೀಮತಿ ಬೇಬಿ ಎ. ಹಾಗೂ ಕು. ವಿತುಲ ರವರು ವಿಜೇತರ ಪಟ್ಟಿ ವಾಚಿಸಿದರು.


ಮುಖ್ಯ ಶಿಕ್ಷಕರಾದ ನಾಗರಾಜ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ಷಿಕ ವರದಿ ಮಂಡಿಸಿದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜ್ಯೋತಿ ವಿದ್ಯಾಸಂಘದ ಸದಸ್ಯರಾದ ಅಶೋಕ್ ಪೀಚೆ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಸುಮನ ಕೆ.ಪಿ. ವಂದಿಸಿ, ಶ್ರೀಮತಿ ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.