ಪಂಜ: ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿಯಾಗಿ ಪಂಬೆತ್ತಾಡಿ ಗ್ರಾಮ ಸಮಿತಿ ಸಭೆ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿ ಪಂಬೆತ್ತಾಡಿ ಗ್ರಾಮದಲ್ಲಿ ಗ್ರಾಮ ಸಮಿತಿಯ ಸಂಚಾಲಕರು ಹಾಗೂ ಬೈಲುವಾರು ಸಮಿತಿಯ ಸದಸ್ಯರ ಸಭೆಯು ಪಂಬೆತ್ತಾಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ವಠಾರದಲ್ಲಿ ಜರುಗಿತು .

ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಜಾತ್ರೋತ್ಸವ ಉತ್ಸವ ಸಮಿತಿಯ ಸದಸ್ಯ ಮಹೇಶ್ ಕುಮಾರ್ ಕರಿಕಳ ಸಭಾಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಾತ್ರೋತ್ಸವ ಉತ್ಸವ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರ್, ಗ್ರಾಮ ಸಂಚಾಲಕರಾದ ಧರ್ಮಣ್ಣ ನಾಯ್ಕ ಗರಡಿ, ಜಗದೀಶ್ ಮಠ, ಅಶ್ವಿನ್ ಬಾಬ್ಲುಬೆಟ್ಟು, ಮೇದಪ್ಪ ಪಂಜದ ಬೈಲು, ಸಂತೋಷ್ ಜಾಕೆ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರಜಿತ್ ಭಟ್ ಪಂಜಬೀಡು, ಶ್ರೀನಿವಾಸ ಬಿ ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಧರ್ಮಣ್ಣ ನಾಯ್ಕ ಗರಡಿ ಸ್ವಾಗತಿಸಿದರು. ಉತ್ಸವ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಪ್ರಾಸ್ತಾವಿಕ ಮಾತನಾಡಿದರು.ಅಶ್ವಿನ್ ಬಾಬ್ಲುಬೆಟ್ಟು ವಂದಿಸಿದರು.