ಡಾ.ಕೆ.ವಿ.ರೇಣುಕಾಪ್ರಸಾದ್ ಜೈಲಿನಿಂದ ಬಿಡುಗಡೆ

0

ಕೆ.ವಿ.ಜಿ. ಮೆಡಿಕಲ್ ‌ಕಾಲೇಜು ಆಡಳಿತಾಧಿಕಾರಿ ಪ್ರೊ| ಎ.ಎಸ್.ರಾಮಕೃಷ್ಣ ರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಜೈಲಿನಲ್ಲಿದ್ದ ಡಾ.ಕೆ.ವಿ.ರೇಣುಕಾಪ್ರಸಾದ್ ರವರಿಗೆ ಜಾಮೀನು ದೊರೆತಿದ್ದು, ಅವರು ಇಂದು ಜೈಲಿನಿಂದ ಬಿಡುಗಡೆಯಾಗಿರುವುದಾಗಿ ತಿಳಿದುಬಂದಿದೆ.

ಡಾ.ಕೆ.ವಿ.ರೇಣುಕಾಪ್ರಸಾದ್ ರಿಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ರೇಣುಕಾಪ್ರಸಾದ್ ರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಅವರು ನಾಳೆ ಸುಳ್ಯಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.