ಐವರ್ನಾಡು : ಭೈರವಿ ನಾಟ್ಯಾಲಯದ ವಿದ್ಯಾರ್ಥಿಗಳಿಗೆ ಗೆಜ್ಜೆ ಪೂಜೆ

0

ಪಂಚಲಿಂಗೇಶ್ವರ ಸಾಂಸ್ಕೃತಿಕ ಕಲಾವೇದಿಕೆ ಐವರ್ನಾಡು ಇದರ ಆಶ್ರಯದಲ್ಲಿ ಭೈರವಿ ನಾಟ್ಯಾಲಯ ಐವರ್ನಾಡು ಇದರ ವಿದ್ಯಾರ್ಥಿಗಳಿಗೆ ಗೆಜ್ಜೆಪೂಜೆಯು ಜ.14 ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಗೆಜ್ಜೆಪೂಜೆ ನೆರವೇರಿಸಿದರು. ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷರಾದ ರಾಮಚಂದ್ರ ಪಲ್ಲತಡ್ಕ ಇವರ ನಿರ್ದೇಶನದಂತೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ್ ಮಡ್ತಿಲ ಹಾಗು ವೈದಿಕ ಮುಖ್ಯಸ್ಥರಾದ ಶ್ರೀಮತಿ ಮತ್ತು ರಾಜಾರಾಮ ರಾವ್ ಉದ್ದoಪಾಡಿ ಇವರುಗಳ ಉಪಸ್ಥಿತಿಯಲ್ಲಿ ನೃತ್ಯ ತರಬೇತುದಾರರಾದ ಶ್ರೀಮತಿ ವಿದ್ಯಾಸರವಣ ಹಾಗೂ ಕು. ರಕ್ಷಿತಾ ಭಟ್ ಇವರು ಅವರ ಗುರುಗಳಾದ ವಿದುಷಿ ಪ್ರಮೀಳಾ ಲೋಕೇಶ್ ಕಡಬ ವಿದ್ಯಾರ್ಥಿಗಳಿಗೆ ಗೆಜ್ಜೆ ವಿತರಿಸಿ ಶುಭಾಶೀರ್ವಾದ ಮಾಡಿ ಕಾರ್ಯಕ್ರಮ ನೆರವೇರಿಸಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಊರ ಕಲಾಭಿಮಾನಿಗಳು ಉಪಸ್ಥಿತರಿದ್ದರು.