ಆಲೆಟ್ಟಿ ಸದಾಶಿವ ಭಜನಾ ಸಂಘದ ಸಭೆ -ಮಾ.8 ರಂದು ಏಕಾಹ ಭಜನೆ

0

ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಸಭೆಯು ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜ.15 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಮಾ.8 ರಂದು ಮಹಾ ಶಿವರಾತ್ರಿ ಉತ್ಸವದ ದಿನದಂದು ವರ್ಷಂಪ್ರತಿ ನಡೆಯಲಿರುವ ಏಕಾಹ ಭಜನೆಯು ನಡೆಸುವುದಾಗಿ ಪ್ರಸ್ತಾಪಿಸಲಾಯಿತು.

ದೇವಸ್ಥಾನದ ಪೂರ್ವ ಭಾಗದ ರಾಜಾಂಗಣಕ್ಕೆ ಸುಮಾರು ರೂ. 11 ಲಕ್ಷ ವೆಚ್ಚದಲ್ಲಿ ಶಾಶ್ವತ ಚಪ್ಪರ ನಿರ್ಮಾಣದ ಕುರಿತು ದೇವಳದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಭಜನಾ ಸಂಘದ ವತಿಯಿಂದ ದೇಣಿಗೆ ನೀಡುವ ಬಗ್ಗೆ ತೀರ್ಮಾನಿಸಲಾಯಿತು.
ಸಂಘದ ವತಿಯಿಂದ ಲಕ್ಕಿಡಿಪ್ ಕೂಪನ್ ಆಯೋಜಿಸುವುದೆಂದು ನಿರ್ಧರಿಸಲಾಯಿತು.
ಜ.22 ರಂದು ಪೂರ್ವಾಹ್ನ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಭಜನೆ ಹಾಗೂ ವಿಶೇಷ ಪೂಜೆಯಾಗಿಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ
ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ,
ಸಂಘದ ಗೌರವಾಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ,
ಸೇ. ಸ. ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.