ಇಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

0

ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಸುಬ್ರಹ್ಮಣ್ಯ ಕೆ.ಎಸ್.ಆರ್.ಸಿ ನಿಲ್ದಾಣಕ್ಕೆ ಬಸ್ ಪ್ರವೇಶ ಕ್ಕೆ ವಿಳಂಬ ದೋರಣೆ ಅನುಸರಿಸಿದ. ದೇವಸ್ಥಾನದ ನಿರ್ಧಾರ ಖಂಡಿಸಿ ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ಗ್ರಾಮ ಸಮಿತಿಯವರು ತಿಳಿಸಿದ್ದಾರೆ.

ಸುಬ್ರಹ್ಮಣ್ಯದ ಕೆ. ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಕಾಮಗಾರಿ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಪ್ರವೇಶ ಬಂದ್ ಮಾಡಲಾಗಿದ್ದು ಬಸ್ ಗಳು ನಿಲ್ದಾಣ ಪ್ರವೇಶಿಸುತ್ತಿಲ್ಲ. ಆದ್ದರಿಂದ ತಾತ್ಕಾಲಿಕ ನೆಲೆಯಲ್ಲಿ ಬಸ್ ದೇವಸ್ಥಾನದ ರಸ್ತೆಯಿಂದ ಪ್ರವೇಶ ನೀಡಲು ಮನವಿ ಮಾಡಿದರೂ ದೇವಸ್ಥಾನದವರು ವಿಳಂಬ ಧೋರಣೆ ಅನುಸರಿಸುವುದನ್ನು ಮುಂದುವರೆಸಿದ್ದಾರೆ. ಇದಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಕೆ.ಎಸ್.ಆರ್.ಟಿ ಎದುರು ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ಸುಬ್ರಹ್ಮಣ್ಯ ಠಾಣೆಗೆ ಸಮಿತಿ ಯವರು ಮನವಿ ಮಾಡಿದ್ದಾರೆ.