ಐವರ್ನಾಡು – ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿ

0

ಜ.20 ರಂದು ನಾಗರಿಕಾ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ಧತೆ

ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲು ಐವರ್ನಾಡು ಗ್ರಾಮಸ್ಥರು, ನಾಗರಿಕ ಸೇವಾ ಸಮಿತಿಯವರು ಸಿದ್ಧತೆ ನಡೆಸುತ್ತಿದ್ದಾರೆ.


ಜ.20 ರಂದು ದೇವಸ್ಥಾನದ ರಸ್ತೆಗಾಗಿ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿದುಬಂದಿದೆ.
ಇತ್ತೀಚೆಗೆ ರಸ್ತೆಗೆ ಆಗ್ರಹಿಸಿ ಮುಖ್ಯ ರಸ್ತೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿ ದ್ದರು.ಶಾಸಕಿ ಭಾಗೀರಥಿ ಮುರುಳ್ಯ ರಿಗೆ, ರಾಜಕೀಯ ಮುಖಂಡರಿಗೆ ,ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.


ಆದರೆ ಯಾವುದೇ ಪ್ರಯೋಜನವಾಗಿಲ್ಲವಾದುದರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.