ಚೆಂಬು: ಶ್ರೀ ಭಗವಾನ್ ಸಂಘಕ್ಕೆ ರಾಜ್ಯ ಯುವ ಸಾಂಘಿಕ ಪ್ರಶಸ್ತಿಯ ಹಿರಿಮೆ

0

ತನ್ನ ಸಮಾಜಮುಖಿ ಚಟುವಟಿಕೆಗಳಿಂದ ಅಪಾರ ಜನಮೆಚ್ಚುಗೆಗಳಿಸಿ ,ಕಳೆದ ಅವಧಿಯಲ್ಲಿ ಕೊಡಗು ಜಿಲ್ಲಾ ಅತ್ಯುತ್ತಮ ಸಂಘ ಪ್ರಶಸ್ತಿ ಪಡೆದಿದ್ದ ಚೆಂಬು ಗ್ರಾಮದ ಶ್ರೀ ಭಗವಾನ್ ಸಂಘವು ಕರ್ನಾಟಕ ರಾಜ್ಯ ಅತ್ಯುತ್ತಮ ಯುವ ಸಾಂಘಿಕ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಜ.20ರಂದು ಕಡಬ ತಾಲೂಕಿನ ಸವಣೂರಿನಲ್ಲಿ ನಡೆದ ಯುವಜನ ಮೇಳ ಕಾರ್ಯಕ್ರಮದಲ್ಲಿ ,ರಾಜ್ಯ ಯುವಜನ ಒಕ್ಕೂಟ ನೀಡಿದ ವಿವೇಕಾನಂದ ರಾಜ್ಯ ಯುವ ಸಾಂಘಿಕ ಪ್ರಶಸ್ತಿಯನ್ನು ,ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಸಂಘದ ಗೌರವಾದ್ಯಕ್ಷ ಎನ್.ಸಿ. ಅನಂತ್ ಊರುಬೈಲು ಅವರನ್ನು ಸನ್ಮಾನಿಸಿ, ಸಂಘದ ಸದಸ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

2016 ರಲ್ಲಿ ಎನ್.ಸಿ. ಅನಂತ್ ಊರುಬೈಲುರವರ ನಾಯಕತ್ವದಲ್ಲಿ ಸ್ಥಾಪನೆಯಾದ ಶ್ರೀ ಭಗವಾನ್‌ ಸಂಘವು ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಸಾಮಾಜಿಕ ಶೈಕ್ಷಣಿಕ, ವೈದ್ಯಕೀಯ ಮತ್ತು ಕ್ರೀಡಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಕೈಗೊಂಡಿದ್ದಲ್ಲದೆ, ಆರ್ಥಿಕವಾಗಿ ಕೂಡ ಬಲಿಷ್ಠ ಸಂಘವಾಗಿ ಬೆಳೆದುನಿಂತಿದೆ.