ನಾಳೆ ಸುಳ್ಯದಲ್ಲಿ ನಿಷೇಧಾಜ್ಞೆ ಇಲ್ಲ : ತಹಶೀಲ್ದಾರ್ ಸ್ಪಷ್ಟನೆ

0

ಜ.22ರಂದು ಅಯೋಧ್ಯೆ ಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯುಚ ಸಂದರ್ಭ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆಯನ್ನು ತಾಲೂಕು ಆಡಳಿತ ಘೋಷಿಸಿತ್ತು. ಆದರೆ ಇದೀಗ ಆ ಆದೇಶವನ್ನು ಹಿಂಪಡೆಯಲಾಗಿದೆ ಎಂದು‌ ತಹಶೀಲ್ದಾರ್ ‌ಜಿ.ಮಂಜುನಾಥ್ ತಿಳಿಸಿದ್ದಾರೆ.
ಸುಳ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ಏನೂ ಸಮಸ್ಯೆ ಬರಲಾರದೆಂಬ ವಿಶ್ವಾಸ ಮೂಡಿರುವುದರಿಂದ ನಿಷೇಧಾಜ್ಞೆ ವಿಧಿಸದಿರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.