ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

0

ಅಯೋಧ್ಯೆಯ ರಾಮಜನ್ಮಭೂಮಿಯ ಮೂಲಸ್ಥಾನದಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆಯ ಶುಭ ಘಳಿಗೆಯಲ್ಲಿ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಕರಸೇವಾ ಸಂದರ್ಭದಲ್ಲಿ ಅಯೋಧ್ಯೆಗೆ ತೆರಳಿದ ವಾರಣಾಶಿ ಗೋಪಾಲಕೃಷ್ಣ ಮತ್ತು ಅಶೋಕ ಕೆದಿಲ ತಮ್ಮ ಅನುಭವಗಳನ್ನು ಮೆಲುಕು ಹಾಕಿದರು.